ಅಪರಾಧ

ಮೈಸೂರಿನಲ್ಲಿ ಅಪರಿಚಿತ ವಾಹನ ಢಿಕ್ಕಿ: ಸುಳ್ಯದ ಯುವಕ ಮೃತ್ಯು!

GL

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ:  ಶುಕ್ರವಾರ ಮುಂಜಾನೆ ಮೈಸೂರು ಬಳಿಯ ಮಳವಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ.

core technologies

ಮೃತರನ್ನು ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದ ಕಲ್ತಾರ್ ನಿವಾಸಿ ಶೇಷಪ್ಪ ನಾಯಕ್ ಅವರ ಪುತ್ರ ದೀಕ್ಷಿತ್ (25) ಎಂದು ಗುರುತಿಸಲಾಗಿದೆ.

akshaya college

ದೀಕ್ಷಿತ್ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿ ಉದ್ಯೋಗಿ. ಬೆಂಗಳೂರಿನಿಂದ ಕಂದಡ್ಕದ ಕಲ್ತಾರ್‌ನಲ್ಲಿರುವ ತನ್ನ ಊರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಮೈಸೂರಿಗೆ ಸಮೀಪದ ಮಳವಳ್ಳಿ ಬಳಿ ಅವರು ಸವಾರಿ ಮಾಡುತ್ತಿದ್ದಾಗ, ಅಪರಿಚಿತ ವಾಹನವೊಂದು ಅವರ ಬೈಕಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ಅಪಘಾತದಲ್ಲಿ ದೀಕ್ಷಿತ್ ಅವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನೇಪಾಲ: ಜೈಲು ಸಿಬ್ಬಂದಿ – ಕೈದಿಗಳ ನಡುವೆ ಸಂಘರ್ಷ!! ಜೈಲಿನಿಂದ ಪರಾರಿಯಾದ ಕೈದಿಗಳ ಸಂಖ್ಯೆ ಎಷ್ಟು ಗೊತ್ತೇ?

ಕಾಲ್ಮಂಡು: ಗಲಭೆ ಪೀಡಿತ ನೇಪಾಲದ ಜೈಲೊಂದರಲ್ಲಿ ಭದ್ರತ ಸಿಬಂದಿ ಹಾಗೂ ಕೈದಿಗಳ ನಡುವೆ ಗುರುವಾರ…