tamanvi
ಅಪರಾಧ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವ: ವಿಚಾರಣೆಗೆ ನೋಟಿಸ್!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರುಅಜಿತ್ ರೈ ಹೊಸಮನೆ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.

maithri

ಒಳಮೊಗ್ರು ಗ್ರಾಮದ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವ ಸಲ್ಲಿಸಿದ್ದಾರೆ. ಈ ಸಂಬಂಧ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆ.25ರಂದು ವಿಚಾರಣೆ ನಡೆಯಲಿದೆ.

ಅಜಿತ್ ರೈ ಸ್ವಯಂ ಅಥವಾ ನ್ಯಾಯವಾದಿಯ ಮೂಲಕ ವಿಚಾರಣೆಗೆ ಹಾಜರಾಗಬೇಕು. ತಪ್ಪಿದಲ್ಲಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುತ್ತೂರು ಉಪ ವಿಭಾಗೀಯ ದಂಡಾಧಿಕಾರಿಯೂ ಆಗಿರುವ ಸಹಾಯಕ ಆಯುಕ್ತರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117