ಅಪರಾಧ

ಹಿಂದೂ ಮುಖಂಡ ಮಂಜು ಕೊಳ ಚೂರಿ ಇರಿತ: ಐವರ ಬಂಧನ!!

ಈ ಸುದ್ದಿಯನ್ನು ಶೇರ್ ಮಾಡಿ

ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಸಂಘಟನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೋರ್ವ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಗಳ ಪ್ರಕಾರ ಮಂಜು ಕೊಳ ಅವರು ಮಂಗಳವಾರ ಸಂಜೆ ಮಲ್ಪೆ ಬೀಚ್ ಬಳಿ ಪಲಿಮಾರು ಭಾಗ ಜೋಡಿಯೊಂದರ ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ಕರೆದಿದ್ದರು ಎನ್ನಲಾಗಿದೆ. ಈ ವೇಳೆ ಪರಸ್ಪರ ಮಾತಿಗೆ ಮಾತು ಬೆಳೆದು ಯುವಕನೋರ್ವ ಮಂಜು ಕೊಳ ಅವರಿಗೆ ಚೂರಿ ಇರಿದಿದ್ದಾನೆ. ಹೊಟ್ಟೆಯ ಭಾಗಕ್ಕೆ ಇರಿದ ಪರಿಣಾಮ ಮಂಜು ಕೊಳ ಅವರು ಕುಸಿದು ಬಿದ್ದಿದ್ದು, ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಈ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿರುವುದಾಗಿದೆ. ಯಾರೂ ಸಹ ವದಂತಿಗಳನ್ನು ಹರಡಬಾರದು. ಗಾಯಗೊಂಡ ಮಂಜು ಕೊಳ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 103