ಗುರುವಾಯನಕೆರೆಯಲ್ಲಿ ಪತ್ತೆಯಾದ ಯತೀಶ್ (33 ವ) ಅವರ ಮೃತದೇಹಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತರನ್ನು ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಎಂದು ಗುರುತಿಸಲಾಗಿದೆ.
ಮೃತದೇಹ ಪತ್ತೆಯಾದ ಬಳಿಕ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ಮೂವರು ಆರೋಪಿಗಳು ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಆರೋಪಿಗಳ ಹಲ್ಲೆಯಿಂದಾಗಿ ಯತೀಶ್ ಮೃತಪಟ್ಟಿರುವುದಾಗಿ ಸಹೋದರ ಪೆರ್ನೆ ನಿವಾಸಿ ನಿತಿನ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.






















