ಅಪರಾಧ

ಸಮುದ್ರ ಅಲೆಗಳಿಗೆ ಸಿಲುಕಿ  ಪುತ್ತೂರಿನ ವ್ಯಕ್ತಿ  ಮೃತ್ಯು!

GL
ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಸಹೋದರನ ಪುತ್ರಿಯನ್ನು ಸಮುದ್ರದ ನೀರಿನಿಂದ ರಕ್ಷಿಸಲು ತೆರಳಿದ ಬೆಂಗಳೂರು ನಿವಾಸಿ ಸಮುದ್ರದ ಅಲೆಗಳ ನಡುವೆ ಸಿಲುಕಿ ಮೃತಪಟ್ಟ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ರವಿವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

maithri

ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಜ್ಜದ್ ಆಲಿ (45) ಮೃತರು. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭ ಅಲೆಗಳ ನಡುವೆ ಸಿಲುಕಿದ್ದನ್ನು ಸಾಜಿದ್‌ ಆಲಿ ರಕ್ಷಿಸಿ, ತಾವೇ ಖುದ್ದು ಅಲೆಗಳ ನಡುವೆ ಸಿಲುಕಿ ಘಟನೆ ಸಂಭವಿಸಿದೆ. ನೀರಿನಲ್ಲಿ ಮುಳುಗಿ ವಾಪಸ್‌ ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದವರು, ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದರು. 2015ರಲ್ಲಿ ಪುತ್ತೂರು ನಿವಾಸಿ ಆಲಿಮಾ ರಶೀದಾ ಎಂಬವರನ್ನು ವಿವಾಹವಾಗಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರಿನ ಬನ್ನೂರು ಬಾಡಿಗೆ ಫ್ಲ್ಯಾಟ್ ನಲ್ಲಿ ನೆಲೆಸಿದ್ದರು.

ಸಜ್ಜದ್‌ ಆಲಿ ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಡಿ.29 ರಂದು ಸಜ್ಜದ್ ಆಲಿ ಪುತ್ತೂರಿಗೆ ಸಹೋದರರು ಹಾಗೂ ಕುಟುಂಬಿಕರ ಜತೆಗೆ ಮದುವೆ ಸಮಾರಂಭಕ್ಕೆಂದು ಬಂದಿದ್ದರು. ಮೃತರು ತಾಯಿ ಸಾಜಿದಾ ಬೇಗಂ, ಪತ್ನಿ ಹಾಗೂ ಮಕ್ಕಳಾದ ಕೈರಾ ಫೈಜಾ, ಹಮ್ಹಾನ್ ಆಲಿ, ಹುಸೈನ್ ಆಲಿ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೆಕ್ಕಾಗೆ ಹೋಗಲು ಹಣ ನೀಡಲಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಿಂದ ಕಳ್ಳತನ: 1 ಕೋಟಿ ರೂ. ಚಿನ್ನ ಕಳವುಗೈದ ಇಬ್ಬರ ಸೆರೆ!!

ಬೆಂಗಳೂರು: ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಕಳವು…

1 of 109