Gl harusha
ಅಪರಾಧ

ವಿಟ್ಲ: ವಿದ್ಯಾರ್ಥಿ,ಯುವ ಕಲಾವಿದ    ಅಪಘಾತದಲ್ಲಿ ದಾರುಣ ಅಂತ್ಯ.!!

ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ್ದಾರೆ. 2024 ರ ಕೊನೆಯ ದಿನ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ಯುವ ಕಲಾವಿದ, ಬಿಎಸ್‌ಡಬ್ಲ್ಯೂ ವಿದ್ಯಾರ್ಥಿ ಸ್ಥಳದಲ್ಲೇ ಅಸುನೀಗಿದ್ದಾರೆ. 2024 ರ ಕೊನೆಯ ದಿನ ಘಟನೆ ನಡೆದಿದೆ.

srk ladders
Pashupathi
Muliya

ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾರ್ (22) ಮೃತಪಟ್ಟ ವಿದ್ಯಾರ್ಥಿ. ಬೆಳ್ತಂಗಡಿ ದೇಲಂತಬೆಟ್ಟು ನಿವಾಸಿ, ಪ್ರವೀತ್‌ ಯಕ್ಷಗಾನ ಕಲಾವಿದನೂ ಹೌದು.

ಅರ್ಕುಳ ಸಮೀಪ ಬೈಕ್ ರಸ್ತೆಗೆ ಬಿದ್ದಿದ್ದು ಈ ವೇಳೆ ಐಸ್ ಕ್ರೀಮ್ ಸಾಗಿಸುತ್ತಿದ್ದ ವಾಹನ ಯುವಕನ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವರ್ಷಾಂತ್ಯದಲ್ಲಿ ದಾರುಣ ಘಟನೆ ನಡೆದಿದೆ. ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts