ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಜ.2ರ ಗುರುವಾರ ನಡೆದಿದೆ.
ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸರಕಾರಿ ಬಸ್ ನಿಂದ ಡಿಸೇಲ್ ಟ್ಯಾಂಕ್ ಹೆದ್ದಾರಿಗೆ ಕಳಚಿ ಬಿದ್ದಿದೆ. ತತ್ ಕ್ಷಣ ಬಸ್ ಸಂಚಾರ ಸ್ಥಗಿತಗೊಂಡಿತು
ಮಾಣಿ ಹೆದ್ದಾರಿ ಒಮ್ಮೆಗೆ ಅಸ್ತವ್ಯಸ್ತಗೊಂಡಿತು.
ಬದಲಿ ಬಸ್ಸಿನ ಮೂಲಕ ಪ್ರಯಾಣಿಕರು ಸಂಚರಿಸಲು ಅನುವು ಮಾಡಿಕೊಡಲಾಯಿತು. ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.