tamanvi
ಅಪರಾಧ

ಟ್ರಕ್ – ಬೈಕ್ ಢಿಕ್ಕಿ ; ಸವಾರ ಮೃತ್ಯು| ಟ್ರಕ್ ಬೆಂಕಿಗೆ ಆಹುತಿ

D_shiva_bhat
ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾಪು: ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ.

maithri

ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ.

ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಟ್ರಕ್ ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117