tamanvi
ಅಪರಾಧ

ಮೂಕಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ; ಹಸುಗಳ ಕೆಚ್ಚಲು ಕೊಯ್ದು ವಿಕೃತಿ.!!

ಮೂಖ ಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ ಎಸಗಿದ್ದಾರೆ.ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರಲ್ಲಿ ಕಿಡಿಗೇಡಿಗಳು ಮೂಖ ಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ ಎಸಗಿದ್ದಾರೆ.ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ. 

ಚಾಮರಾಜಪೇಟೆ ವಿನಾಯಕ ನಗರದ ಪೆನ್ನನ್ ಮೊಲಾದಲ್ಲಿ ಇಂತಹದೊಂದು ಕ್ರೂರ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಮಧ್ಯರಾತ್ರಿಯೇ ಕಿಡಿಗೇಡಿಗಳು ಹಸುವಿನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇಂದು ನಸುಕಿನ ಜಾವ ಹಸುವಿನ ಮಾಲೀಕರಿಗೆ ಪಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ. ನೀಚರ ಕೃತ್ಯಕ್ಕೆ ಮೂರು ಹಸುಗಳ ಮೂಕ ರೋಧನೆ ಮುಗಿಲು ಮುಟ್ಟಿದೆ.

3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರೋ ರಾಕ್ಷಸ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿನಾಯಕ ನಗರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಿಜೆಪಿ ಸಂಸದ ಪಿ.ಸಿ ಮೋಹನ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿರುವ ಈ ಘಟನೆ ದನದ ಆಸ್ಪತ್ರೆ ಇರುವ ಹಿಂಭಾಗದಲ್ಲೇ ನಡೆದಿದೆ. ಕಳೆದ ಆರು ತಿಂಗಳ ಹಿಂದೆ ಚಾಮರಾಜಪೇಟೆ ಪಶು ಆಸ್ಪತ್ರೆಯ ಎತ್ತಂಗಡಿಗೆ ಪ್ಲಾನ್ ಮಾಡಲಾಗಿತ್ತಂತೆ. ಈ ವೇಳೆ ಇದೇ ಹಸುಗಳನ್ನ ಮಾಲೀಕರು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು. ಹೀಗಾಗಿ ದುಷ್ಮನ್‌ಗಳು ಈ ಕೃತ್ಯ ಎಸಗಿರಬಹುದೆಂದು ಮಾಲೀಕರು ಅನುಮಾನ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119