Gl jewellers
ಅಪರಾಧ

ಜಲ್ಲಿಕಟ್ಟು: ಏಳು ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ!!

ಜಲ್ಲಿಕಟ್ಟು ಸ್ಪರ್ಧೆ ವೀಕ್ಷಿಸಲು ಆಗಮಿಸಿದ್ದ ಪ್ರೇಕ್ಷಕ ಮೃತಪಟ್ಟಿದ್ದರೆ, ಕೇಂದ್ರ ಜಿಲ್ಲೆಗಳಲ್ಲಿ ಆಯೋಜಿಸಿದ್ದ ಇತರ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ಐವರು ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿವಿಧೆಡೆ ಜಲ್ಲಿಕಟ್ಟು ಮತ್ತು ಸಂಬಂಧಿತ ಹೋರಿ ಪಳಗಿಸುವ ಸ್ಪರ್ಧೆಗಳಲ್ಲಿ ಗುರುವಾರ ಕನಿಷ್ಠ ಏಳು ಮಂದಿ ಜೀವ ಕಳೆದುಕೊಂಡಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Papemajalu garady
Karnapady garady

ಮೃತಪಟ್ಟವರ ಪೈಕಿ ಆರು ಮಂದಿ ಪ್ರೇಕ್ಷಕರು. ಶಿವಗಂಗಾ ಜಿಲ್ಲೆಯ ಸಿರವಾಯಲ್ ಮಂಜುವಿರಟ್ಟು ಎಂಬಲ್ಲಿ ಹೋರಿ ತಿವಿದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಧುರೈನಲ್ಲಿ ನಡೆದ ಅಲಂಗನಲ್ಲೂರು ಜಲ್ಲಿಕಟ್ಟು ಸ್ಪರ್ಧೆ ವೀಕ್ಷಿಸಲು ಆಗಮಿಸಿದ್ದ ಪ್ರೇಕ್ಷಕನೊಬ್ಬ ಮೃತಪಟ್ಟಿದ್ದರೆ, ಕೇಂದ್ರ ಜಿಲ್ಲೆಗಳಲ್ಲಿ ಆಯೋಜಿಸಿದ್ದ ಇತರ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ಐವರು ಮೃತಪಟ್ಟಿದ್ದಾರೆ.

ಕೃಷ್ಣಗಿರಿ ಜಿಲ್ಲೆಯ ಬಸ್ತಲಪಲ್ಲಿ ಎಂಬಲ್ಲಿ ಆಯೋಜಿಸಿದ್ದ ಎರಥು ವಿಡಂ ವಿಳಾ ಎಂಬ ಹೋರಿ ಓಟದಲ್ಲಿ 30 ವರ್ಷದ ವ್ಯಕ್ತಿ ಅಸುನೀಗಿದರೆ, ಸೇಲಂ ಜಿಲ್ಲೆಯ ಸೆಂಥರಪಟ್ಟಿ ಎಂಬಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 45 ವರ್ಷದ ವ್ಯಕ್ತಿ ಜೀವ ಕಳೆದುಕೊಂಡಿದ್ದಾರೆ.

ಮತ್ತೊಂದು ಘಟನೆಯಲ್ಲಿ ಸಿರವಾಯಲ್ ಸ್ಪರ್ಧಾ ಸ್ಥಳದಿಂದ ಓಡಿದ ಎತ್ತನ್ನು ಹಿಡಿಯಲು ಪ್ರಯತ್ನಿಸಿದ ಹೋರಿಯ ಮಾಲೀಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪದುಕೊಟ್ಟೆ, ಕರೂರು ಮತ್ತು ತಿರುಚ್ಚಿ ಜಿಲ್ಲೆಗಳಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆ ವೇಳೆ 156 ಮಂದಿ ಗಾಯಗೊಂಡಿದ್ದಾರೆ. ಸಿರವಾಯಲ್ ನಲ್ಲಿ ಮೃತಪಟ್ಟ ವ್ಯಕ್ತಿಯನ್ನು ದೇವಕೊಟ್ಟೆನ ಎಸ್‌.ಸುಬ್ಬಯ್ಯ ಎಂದು ಗುರುತಿಸಲಾಗಿದೆ.ಪ್ರಸಿದ್ಧ ಅಲಂಗನಲ್ಲೂರು ಜಲ್ಲಿಕಟ್ಟುವಿನಲ್ಲಿ 17 ಮಂದಿ ಹೋರಿ ಮಾಲೀಕರು ಮತ್ತು 33 ಮಂದಿ ಪ್ರೇಕ್ಷಕರು ಸೇರಿ 76 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೆಟ್ಟುಪಟ್ಟಿಯಿಂದ ಜಲ್ಲಿಕಟ್ಟು ವೀಕ್ಷಿಸಲು ಆಗಮಿಸಿದ್ದ ಪಿ.ಪೆರಿಸ್ವಾಮಿ (56) ಚಿಕಿತ್ಸೆಗೆ ಸ್ಪಂದಿಸದೇ ಅಸು ನೀಗಿದರು.

ಒದುರಂಪಟ್ಟಿಯ ಎಸ್.ಪೆರುಮಾಳ್ (70) ಎಂಬ ವ್ಯಕ್ತಿ ಮಂಗಲದೇವನಪಟ್ಟಿ ಎಂಬಲ್ಲಿ ಬಸ್‌ಗೆ ಕಾಯುತ್ತಿದ್ದರು. ಆಗ ಸ್ಪರ್ಧಾಕಣದಿಂದ ಓಡಿಬಂದ ಎತ್ತು ಡಿಕ್ಕಿ ಹೊಡೆದು ಅವರು ಮೃತಪಟ್ಟರು.

ಪುದುಕೊಟ್ಟೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಅವರನ್ನು ತಕ್ಷಣ ಸಾಗಿಸಲಾಯಿತಾದರೂ, ಅವರು ಆ ವೇಳೆಗಾಗಲೇ ಮೃತಪಟ್ಟಿದ್ದನ್ನು ವೈದ್ಯರು ಘೋಷಿಸಿದರು. 607 ಎತ್ತುಗಳು ಮತ್ತು 300 ಮಂದಿ ಪಳಗಿಸುವವರು ಇದ್ದ ಈ ಕಾರ್ಯಕ್ರಮದಲ್ಲಿ 10 ಮಂದಿ ಗಾಯಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts