ಮಂಗಳೂರು: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62.ವ) ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.26) ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು.