tamanvi
ಅಪರಾಧ

ಟೈಮ್ಸ್ ಆಫ್ ಕುಡ್ಲ  ಪತ್ರಿಕೆ ಸಂಪಾದಕ ಶಶಿ ಆರ್.ಬಂಡಿಮಾ‌ರ್ ಹೃದಯಾಘಾತದಿಂದ ನಿಧನ!!

GL
ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ ಸಂಸ್ಥಾಪಕರು, ಶಶಿ ಬಂಡಿಮಾರ್ ರವರು ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

Mangaluru: ಟೈಮ್ಸ್ ಆಫ್ ಕುಡ್ಲ ತುಳು ಪತ್ರಿಕೆಯ( Times of kudla)

ಸಂಸ್ಥಾಪಕರು, ಶಶಿ ಬಂಡಿಮಾರ್ ರವರು ನಾಗಾಲ್ಯಾಂಡ್ (Nagaland)ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಟೈಮ್ಸ್ ಆಫ್ ಕುಡ್ಲ ಎನ್ನುವ ತುಳುಪತ್ರಿಕೆಯನ್ನು ಸಮಾಜಕ್ಕೆ ಸಮರ್ಪಿಸಿ, ತುಳು ನಾಡು ನುಡಿ ಸಂಸ್ಕೃತಿಯ ಹಿರಿಮೆಯನ್ನು ವಿಶ್ವದಾದ್ಯಂತ ಮೆರೆಸುವುದಕ್ಕಾಗಿ, ಬಪ್ಪನಾಡು ದುರ್ಗಾಪರಮೇಶ್ವರಿ ತಾಯಿಯ ಕ್ಷೇತ್ರದ ಆವರಣದಲ್ಲಿ ತುಳು ಸಮ್ಮೇಳನವನ್ನ ಗೈದು ಅಸಂಖ್ಯ ತುಳು ಸಾಧಕರನ್ನು ಗುರುತಿಸಿ ತುಳುವಿನ ಬಗ್ಗೆ ಸರಕಾರದ ಕಣ್ಣೆರೆಸುವ ಪ್ರಯತ್ನ ಮಾಡಿದ್ದಾರೆ.

15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದ ಇವರ ತುಳು ಪತ್ರಿಕೆ ಅಪಾರ ನಷ್ಟದಲ್ಲಿ ನಡೆಯುತ್ತಿದ್ದರು ಸಹ ಪತ್ರಿಕೋದ್ಯಮವನ್ನು ಬಲಿಷ್ಠ ಪಡಿಸುವುದಕ್ಕಾಗಿ, ದೂರದ ನಾಗಾಲ್ಯಾಂಡ್ ನಲ್ಲಿ ಫರ್ನಿಚರ್ ತಯಾರಿಸಿ ಅದರ ವ್ಯಾಪಾರ ಮೂಲಕ ಬಂದ ಸಂಪತ್ತನ್ನು ತುಳುಪತ್ರಿಕೆಗೆ ಭಾಷಾ ಸಾಹಿತ್ಯಕ್ಕೆ ವಿನಿಯೋಗ ಮಾಡುತ್ತಿದ್ದ ಬಂಡಿಮಾರವರು ತುಳು ಭಾಷೆಗೆ ತನ್ನದೇ ರೀತಿಯಲ್ಲಿ ಕೊಡುಗೆಯನ್ನು ನೀಡಿದ್ದಾರೆ.

ಶಶಿ ಬಂಡಿಮಾ‌ರ್ ಅವರಿಗೆ ಜೈ ತುಲುನಾಡ್ (ರಿ) ಸಂಘಟನೆ “ತುಳುವ ನೇಸರೆ” ಎನ್ನುವ ಬಿರುದು ಸೇರಿದಂತೆ ಅನೇಕ ಬಿರುದು ಪ್ರಶಸ್ತಿಗಳನ್ನು ಅನೇಕ ತುಳು ಸಂಘಟನೆಗಳು ನೀಡಿ ಗೌರವಿಸಿದ್ದವು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹನಿಮೂನ್ ಕೊಲೆ ಪ್ರಕರಣಕ್ಕೆ ಹೋಲುವ ಮತ್ತೊಂದು ಘಟನೆ | ವಾಕಿಂಗ್ ವೇಳೆ ಪತಿಯ ಕೊಲೆಗೆ ಪತ್ನಿ ರೂಪಿಸಿದ್ದ ಸಂಚು ಬಯಲು!!

ನವವಿವಾಹಿತ ದಂಪತಿಗಳು ಸಂಜೆ ನಡಿಗೆಗೆ ತೆರಳಿದ್ದ ವೇಳೆ ಸಂಭವಿಸಿದ ಹಿಟ್–ಅಂಡ್–ರನ್ ಪ್ರಕರಣವು…