tamanvi
ಅಪರಾಧ

ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸ ನಿಧನ

D_shiva_bhat
108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸ (72 ವ.) ಅವರು ಕೆದಿಲದ ಅಂಗರಜೆಯ ಸ್ವಗೃಹದಲ್ಲಿ ಫೆ. 8ರಂದು ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದೃಗ್ಗಣಿತರೀತ್ಯಾ ಪಂಚಾಂಗದ ಕರ್ತೃ,  108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕ ಯರ್ಮುಂಜ ಶಂಕರ ಜೋಯಿಸ (72 ವ.) ಅವರು ಕೆದಿಲದ ಅಂಗರಜೆಯ ಸ್ವಗೃಹದಲ್ಲಿ ಫೆ. 8ರಂದು ನಿಧನರಾದರು.

maithri

ಯರ್ಮುಂಜ ಭೀಮ ಜೋಯಿಸರ ಮಗನಾದ ಇವರು, ವೈಜಯಂತೀ ಪಂಚಾಂಗದ ಆದ್ಯಪ್ರವರ್ತಕರಾದರು.

ಧರ್ಮಶಾಸ್ತ್ರದಲ್ಲಿಯೂ ಅಪಾರ ಪಾಂಡಿತ್ಯ ಸಂಪಾದಿಸಿದ್ದರು. ಹಲವು ಜೌತಿಷ ವಿದ್ವತ್ ಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಿರುವ ಇವರು  ಗೃಹನಿರ್ಮಾಣಕ್ಕೆ ವಾಸ್ತು ಮಾರ್ಗದರ್ಶನ ನೀಡುತ್ತಿದ್ದರು.

ಇವರು ಬೈಲೂರು ಅನಂತಪದ್ಮನಾಭ ತಂತ್ರಿ ಸಂಸ್ಮರಣಾ ಪ್ರಶಸ್ತಿ (2O18), ಪೋಳ್ಯ ಲ. ವೆಂ. ಮಠ-ತತ್ತ್ವ ಧರ್ಮ ಸಭಾ-ಸನ್ಮಾನ ಪತ್ರ (2019), ಮಿತ್ತೂರು ಸಂಪ್ರತಿಷ್ಠಾನ- ವಿದ್ವತ್ ಪ್ರಶಸ್ತಿ (2019),

ಕಿಳಿಂಗಾರು ವಸಿಷ್ಠ ಪ್ರಶಸ್ತಿ 2022 ಮುಂತಾದ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ಉಡುಪಿಯ ಪುತ್ತಿಗೆ ಮಠದ ಮುಖ್ಯ ಪ್ರಾಣ ಶ್ರೀಕೃಷ್ಣ ಪಂಚಾಂಗಕ್ಕೆ ಗಣಿತ, ಸುಪ್ರಸಿದ್ಧ ಶಾರದಾ, ಹೊಸದಿಗಂತ, ಬೆಂಗಳೂರು ಮುದ್ರಣಾಲಯ, ಪ್ರಜಾವಾಣಿ ಇತ್ಯಾದಿ ಹತ್ತು ಹಲವು ಕ್ಯಾಲೆಂಡರ್ ಹಾಗೂ ಡೈರಿಗಳಿಗೆ ಸಂಪೂರ್ಣ ಪಂಚಾಂಗ ಮಾಹಿತಿ ನೀಡುತ್ತಿದ್ದರು.

ಮೃತರು ಪತ್ನಿ, ಮಗ, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117