tamanvi
ಅಪರಾಧ

ಕರ್ನಾಟಕದ ಖ್ಯಾತ ಕ್ರೀಡಾಪಟು ಬೃಂದಾ ಪ್ರಭು ನಿಧನ

D_shiva_bhat
ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು(68 ವರ್ಷ) ಅವರು ಇಂದು ಮುಂಜಾನೆ ಕಾಶಿಯಲ್ಲಿ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕರ್ನಾಟಕದ ಹೆಸರಾಂತ ಕ್ರೀಡಾಪಟು ಬೃಂದಾ ಪ್ರಭು(68 ವರ್ಷ) ಅವರು ಇಂದು ಮುಂಜಾನೆ ಕಾಶಿಯಲ್ಲಿ ನಿಧನರಾಗಿದ್ದಾರೆ.

maithri

ಇವರು ಮೂರೂವರೆ ದಶಕಗಳ ಹಿಂದೆ ಅಂತರ್ ರಾಷ್ಟ್ರೀಯ ಮಹಿಳಾ ಫುಟ್ಬಾಲ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ರಾಷ್ಟ್ರೀಯ ಅಥ್ಲೆಟಿಕ್ಸ್‌ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಬೆಂಗಳೂರು ವಿಶ್ವವಿದ್ಯಾನಿಲಯದ ವಾಲಿಬಾಲ್ ತಂಡದ ಉಪ ನಾಯಕಿಯಾಗಿದ್ದರು. ಅಂಚೆ ಮತ್ತು ತಂತಿ ಇಲಾಖೆಯ ಅಖಿಲ ಭಾರತ ಕ್ರೀಡಾಕೂಟದ ಶಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಕೂಡ ಆಗಿದ್ದರು.

ಇವರು ತಮ್ಮ ಪತಿ ಭಾರತದ ಪ್ರಖ್ಯಾತ ಅಂತರ್ ರಾಷ್ಟ್ರೀಯ ಅಥೀಟ್, ಧ್ಯಾನ್‌ಚಂದ್ ಪ್ರಶಸ್ತಿ ಪುರಸ್ಕೃತ ಉದಯ ಪ್ರಭು ಮತ್ತು ಅಮೆರಿಕಾದಲ್ಲಿ ನೆಲೆಸಿರುವ ಪುತ್ರನನ್ನು ಅಗಲಿದ್ದಾರೆ.

ಬೃಂದಾ ಪ್ರಭು ಅವರು ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ಹೊರಟು ಪ್ರಯಾಗ್ ರಾಜ್‌ ಗೆ ಹೋಗಿ ಪುಣ್ಯಸ್ನಾನ ಮಾಡಿ, ರವಿವಾರ ಕಾಶಿಗೆ ತಲುಪಿ ವಿಶ್ವೇಶ್ವರನ ದರ್ಶನ ಮುಗಿಸಿ ಮಲಗಿದ್ದವರು. ಮುಂಜಾನೆ ನಿದ್ದೆಯಲ್ಲಿಯೇ ಇಹಲೋಕ ತ್ಯಜಿಸಿದ್ದಾರೆ. ಸದ್ಯಕ್ಕೆ ಮೃತದೇಹವನ್ನು ಕಾಶಿ ಮಠದಲ್ಲಿ ಇರಿಸಲಾಗಿದ್ದು, ನಾಳೆ ಮಗ ಬಂದ ತಕ್ಷಣ ಅಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಉದಯ ಪ್ರಭು ಅವರು ತಿಳಿಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117