tamanvi
ಅಪರಾಧ

ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ!

D_shiva_bhat
ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ (88) ಅವರು ಗುರುವಾರ ಮುಂಜಾನೆ ಮನೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಕೆಲ ದಿನಗಳ ಹಿಂದೆಯಷ್ಟೇ ಮಣಿಪಾಲ ಆಸ್ಪತ್ರೆಗೆ ಹೋಗಿ ಬಂದಿದ್ದರು. ಆರೋಗ್ಯವೂ ಸುಧಾರಿಸಿತ್ತು. ಮುಂಜಾನೆ 3.30 ಗಂಟೆಯಷ್ಟೊತ್ತಿಗೆ ಇದ್ದಕ್ಕಿದ್ದ ಹಾಗೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ: ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ

maithri

ಬೊಮ್ಮಗೌಡ (88) ಅವರು ಗುರುವಾರ(ಫೆ.13) ಮುಂಜಾನೆ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ ಅರೋಗ್ಯ ಸುಧಾರಿಸಿ ಮನೆಗೆ ವಾಪಸ್ಸಾಗಿದ್ದರು ಆದರೆ ಗುರುವಾರ ಮುಂಜಾನೆ ಸುಮಾರು 3.30 ಗಂಟೆಯ ಹೊತ್ತಿಗೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ಮಾಹಿತಿ ನೀಡಿದೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಆಗಿದ್ದ ಸುಕ್ರಿ ಬೊಮ್ಮ ಗೌಡ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದರು. ಜಾನಪದ ಶೈಲಿಯ ಹಾಡುಗಳನ್ನು ಹಾಡುತ್ತಿದ್ದುದರಿಂದ ಅವರಿಗೆ ಜಾನಪದದ ಕೋಗಿಲೆ ಎಂದೂ ಕೂಡ ಕರೆಯುತ್ತಿದ್ದರು.

ಸುಕ್ರಿ ಬೊಮ್ಮ ಗೌಡ ಅವರಿಗೆ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅಷ್ಟು ಮಾತ್ರವಲ್ಲದೆ ನಾಡೋಜ, ಆಳ್ವಾಸ್‌ ನುಡಿಸಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಇವರಿಗೆ ಲಭಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117