tamanvi
ಅಪರಾಧ

ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ..!

D_shiva_bhat
ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದ‌ರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಅಶೋಕನಗರದ ಗರುಡ ಮಾಲ್ ಹತ್ತಿರ

maithri

ಶನಿವಾರ ತಡರಾತ್ರಿ, ಕಾಂಗ್ರೆಸ್ ಮುಖಂಡ ಶೇಖ್ ಹೈದ‌ರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲೈವ್ ಬ್ಯಾಂಡ್ ಪ್ರದರ್ಶನವನ್ನು ನೋಡಿ ಹೊರಬಂದ ನಂತರ, ಶೇಖ್ ಹೈದ‌ರ್ ಅಲಿ ಮತ್ತು ಅವರ ಸ್ನೇಹಿತ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಆರೋಪಿಗಳು ಬೈಕ್ ಅನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದ ಹೈದರ್ ಅಲಿಯನ್ನು ಪೊಲೀಸರು ತಕ್ಷಣ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿಯೇ ಅವರು ಸಾವನ್ನಪ್ಪಿದರು. ಘಟನೆ ಬಳಿಕ, ಬೌರಿಂಗ್ ಆಸ್ಪತ್ರೆ ಬಳಿ ನೂರಾರು ಜನರು ಜಮಾಯಿಸಿದ್ದರು. ಮತ್ತು ಅವರು ಆಕ್ರೋಶ ವ್ಯಕ್ತಪಡಿಸಿ ಲಾಂಗು-ಮಚ್ಚು ಝಳಪಿಸಿ ಆಸ್ಪತ್ರೆ ಗೇಟ್ ಮುಚ್ಚಲು ಪ್ರಯತ್ನಿಸಿದರು. ಆದಾಗ್ಯೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಈ ದಾಳಿಯಲ್ಲಿ ಹೈದರ್ ಅಲಿಯೊಂದಿಗೆ ಇದ್ದ ಅವರ ಸ್ನೇಹಿತನು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರ್ ಅಲಿ, ಶಾಸಕ ಎನ್.ಎ.ಹ್ಯಾರಿಸ್ ಅವರೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಅವರು ಹ್ಯಾರಿಸ್ ಪರ ಪ್ರಚಾರದಲ್ಲಿ ಕೂಡ ಭಾಗವಹಿಸಿದ್ದರು. ಪ್ರಕರಣ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಮತ್ತು ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಡಿಸಿಪಿ ಶೇಖ‌ರ್ ಮಾಹಿತಿ ನೀಡಿದಂತೆ, ಈ ಪ್ರಕರಣದಲ್ಲಿ ಹೈದ‌ರ್ ಅಲಿ ವಿರುದ್ಧ 11 ಪ್ರಕರಣಗಳಿವೆ ಅವುಗಳಲ್ಲಿ ಮಾರಣಾಂತಿಕ ಹಲ್ವೆ, ಹಲ್ಲೆ ಮತ್ತು ಎಸ್ಟಿಪಿಎಸ್ ಕೇಸ್‌ಗಳೂ ಸೇರಿವೆ. ಹೈದ‌ರ್ ಅಲಿ ಅಶೋಕನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಹತ್ಯೆಗೆ ಹಳೆಯ ವೈಶಮ್ಯ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117