ಕಾಡಾನೆ-ಮಾನವನ ನಡುವಿನ ಸಂಘರ್ಷದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಬ್ಯಾದನೆಯಲ್ಲಿ ನಡೆದಿದೆ.
ಅನಿಲ್ (28 ವ.) ಮೃತಪಟ್ಟ ಯುವಕ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬ್ಯಾದನೆ ಗ್ರಾಮದಲ್ಲಿ ಘಟನೆ ನಡೆದಿದೆ.
ಅಣ್ಣಮಲೈ ಎಸ್ಟೇಟ್ಗೆ ಕೆಲಸಕ್ಕೆ ಬಂದಿದ್ದ ಗುಜನಹಳ್ಳಿ ಗ್ರಾಮದ ಅನಿಲ್ ಕೆಲಸ ಮುಗಿಸಿ ಮನೆಗೆ ತೆರಳುವಾಗ ದಾಳಿ ಮಾಡಿದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿ, ತುಳಿದು ಕೊಲೆಗೈದಿದೆ. ಸ್ಥಳದಲ್ಲಿ ಮೃತ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.