ಬೆಳ್ತಂಗಡಿ: ಕಾರನ್ನು ಓವರ್ಟೇಕ್ ಮಾಡುವ ಭರದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಬುಧವಾರ ನಡೆದಿದೆ.
ಮೃತ ಸವಾರನನ್ನು ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಎಂದು ಗುರುತಿಸಲಾಗಿದೆ.
ಸಯ್ಯದ್ ಪಾಶ ಅವರು ತಮ್ಮ ಬೈಕ್ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ໖໐໖໖.
ಈ ಕುರಿತು ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.