tamanvi
ಅಪಘಾತ

ಕೃಷಿ ತ್ಯಾಜ್ಯಕ್ಕೆ ಬೆಂಕಿ; ಸಜೀವ ದಹನವಾದ ಕೃಷಿಕ!!

D_shiva_bhat
ಗದ್ದೆಯಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ಸುತ್ತೆಲ್ಲಾ ಹಬ್ಬುತ್ತಿರುವ ವೇಳೆ ಅದನ್ನು ಆರಿಸಲು ಹೋದ ಕಷಿಕರೋರ್ವರು ಗದ್ದೆಯಲ್ಲೇ ಸಜೀವ ದಹನವಾದ ದಾರುಣ ಘಟನೆ ಎ. 5ರಂದು ಮಧ್ಯಾಹ್ನ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ : ಗದ್ದೆಯಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ಸುತ್ತೆಲ್ಲಾ ಹಬ್ಬುತ್ತಿರುವ ವೇಳೆ ಅದನ್ನು ಆರಿಸಲು ಹೋದ ಕಷಿಕರೋರ್ವರು ಗದ್ದೆಯಲ್ಲೇ ಸಜೀವ ದಹನವಾದ ದಾರುಣ ಘಟನೆ ಎ. 5ರಂದು ಮಧ್ಯಾಹ್ನ ಕುಂದಾಪುರ ತಾಲೂಕಿನ ಕಾಳಾವರದ ಬಡಾಗುಡ್ಡೆ ಎಂಬಲ್ಲಿ ನಡೆದಿದೆ. ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (80) ಬೆಂಕಿಯ ಕೆನ್ನಾಲಗೆ ಬಲಿಯಾದ ದುರ್ದೈವಿ.

maithri

ಮಗಳು ಬೇಬಿಯೊಂದಿಗೆ ಮಹಾಲಿಂಗ ದೇವಾಡಿಗ ಅವರು ತಮ್ಮ ಗದ್ದೆಯಲ್ಲಿ ಕೃಷಿ ತ್ಯಾಜ್ಯ (ಸುಡುಮಣ್ಣು)ಕ್ಕೆ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಗೆ ಸುತ್ತಲೂ ಆವರಿಸಿದ್ದು, ಸಮೀಪದ ನಾಗಬನಕ್ಕೂ ಬೆಂಕಿ ಹಬ್ಬುತ್ತಿದ್ದರಿಂದ ಬೇಬಿ ಅಲ್ಲಿಗೆ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿರುವ ವೇಳೆ ಇತ್ತ ಮಹಾಲಿಂಗ ದೇವಾಡಿಗ ಬೆಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ರಸ್ತೆ ವ್ಯವಸ್ಥೆ ಸರಿಯಿಲ್ಲದ ಹಿನ್ನೆಲೆ ಅಗ್ನಿಶಾಮಕದಳದ ವಾಹನ ಸ್ಥಳಕ್ಕೆ ಬರಲು ಸಾಧ್ಯವಾಗದೆ ಕಾರ್ಯಾಚರಣೆಗೆ ತೊಡಕಾಗಿದ್ದರಿಂದ ಮಹಾಲಿಂಗ ದೇವಾಡಿಗ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಭೀಮಾಶಂಕರ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…