ಅಪಘಾತ

ಮಂಗಳೂರು:ಭೀಕರ ರಸ್ತೆ ಅಪಘಾತ; ಇಬ್ಬರು ವಿದ್ಯಾರ್ಥಿಗಳ ಸಾವು!

GL
ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾನೆ.

chennai-shopping
maithri

ಕೇರಳದ ಕಾಸರಗೋಡು ಜಿಲ್ಲೆ ಚೆರ್ವತ್ತೂರು ಕೈಯ್ಯರು ನಿವಾಸಿ ಧನುರ್ವೇದ್ (19) ಮತ್ತು ಕಣ್ಣೂರು ಜಿಲ್ಲೆ ಪಿಣರಾಯಿ ನಿವಾಸಿ ಸಂಕೀರ್ತ್ (25) ಮೃತಪಟ್ಟವರು. ಇನ್ನೊಬ್ಬ ವಿದ್ಯಾರ್ಥಿ ತಿರುವನಂತಪುರ ಪತ್ತಮಕ್ಕಲು ನಿವಾಸಿ ಸಿಬಿ ಸ್ಯಾಮ್ (25) ಗಾಯಗೊಂಡವರು. ಮೂವರೂ ನಗರದ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಾಗಿದ್ದು, ಸಂಕೀರ್ತ್ ಮತ್ತು ಸ್ಯಾಮ್ ಡೆಂಟಲ್ ಶಿಕ್ಷಣ ಮತ್ತು ಧನುರ್ವೇದ್ ಹೊಟೇಲ್‌ ಮ್ಯಾನೇಜ್‌ಮೆಂಟ್ ಶಿಕ್ಷಣ ಪಡೆಯುತ್ತಿದ್ದರು.

ಐದು ಮಂದಿ ಸ್ನೇಹಿತರು ಎರಡು ಬೈಕ್‌ಗಳಲ್ಲಿ ಮುಂಜಾನೆ ವೇಳೆ ಪಂಪ್‌ವೆಲ್‌ನತ್ತ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಸಂಕೀರ್ತ್ ಬೈಕ್ ಅನ್ನು ವೇಗವಾಗಿ ನಿರ್ಲಕ್ಷತನದಿಂದ ಹೆದ್ದಾರಿಯಲ್ಲಿ ಚಲಾಯಿಸಿದ್ದು, ಕೆಪಿಟಿ ಬಳಿ ಡಿವೈಡರ್‌ನ ಅಂಚಿಗೆ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ನಿಯಂತ್ರಣ ತಪ್ಪಿ ಬೈಕ್ ಮುಂದಕ್ಕೆ ಸಾಗಿ ಮೂವರೂ ಡಾಮರು ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಸಂಕೀರ್ತ್ ಮತ್ತು ಧನುರ್ವೇದ್‌ಗೆ ಗಂಭೀರ ಗಾಯವಾಗಿದೆ. ಜತೆಗಿದ

ಜತೆಗಿದ್ದ ಸ್ನೇಹಿತರು ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯಯೇ ಅವರು ಮೃತಪಟ್ಟರು. ಸಿಬಿ ಸ್ಯಾಮ್‌ಗೆ ತರಚಿದ ಗಾಯ ವಾಗಿದೆ.ಈ ಸಂಬಂಧ ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿಗಳ ಪುಂಡಾಟ ಹೆಚ್ಚಳ

ನಗರದಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳ ಪುಂಡಾಟ ಹೆಚ್ಚಾಗಿದೆ. ಕೆಎಲ್ ನೋಂದಣಿಯ ಶೇ. 90ರಷ್ಟು ದ್ವಿಚಕ್ರ ವಾಹನಗಳಲ್ಲಿ ತ್ರಿಬ್ಬಲ್‌ ರೈಡ್‌ನಲ್ಲಿ ಸಂಚರಿಸುವುದು ಸಾಮಾನ್ಯವಾಗಿದೆ. ಜತೆಗೆ ಹೆಲ್ಮಟ್ ಧರಿಸದಿರುವುದು, ನಂಬರ್ ಪ್ಲೇಟ್ ಮರೆ ಮಾಚುವುದು, ವೇಗವಾಗಿ ಸಾಗುವುದು ಕಂಡು ಬರುತ್ತಿದೆ. ರಾತ್ರಿ ವೇಳೆ ಎಲ್ಲ ಏರಿಯಾಗಳಲ್ಲಿ ಇದು ಸಾಮಾನ್ಯವಾಗಿದೆ. ಈ ವಿದ್ಯಾರ್ಥಿಗಳೂ ತಲೆಗೆ ಹೆಲ್ಕೆಟ್ ಹಾಕಿಕೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts