ಮೂಡುಬಿದಿರೆ: ಬೈಕ್ ಕೆಎಸ್ ಆರ್ ಟಿಸಿ ಬಸ್ ಗೆ ಹೊಡೆದ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಬೆಳುವಾಯಿ ನಡಿಗುಡ್ಡೆ ಕೊರಗಪ್ಪ ಅವರ ಪುತ್ರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ನಿಕ್ಷಿತಾ(20)ಗೆ ಗಾಯಗಳಾಗಿತ್ತು, ತಕ್ಷಣ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಆರೋಪದಲ್ಲಿ ಮೃತ ಯುವತಿಯ ಗೆಳೆಯ ಮಾರ್ನಾಡಿನ ರಂಜಿತ್ ವಿರುದ್ಧ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.