ಅಪಘಾತ

ಅರಿಯಡ್ಕ; ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು!!

ವಿದ್ಯುತ್ ತಂತಿ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ಎಂಬಲ್ಲಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು; ವಿದ್ಯುತ್ ತಂತಿ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ಅರಿಯಡ್ಕ ಗ್ರಾಮದ ಬೇಂಗತ್ತಡ್ಕ ನಿವಾಸಿ ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಮೃತ ಮಹಿಳೆ.

ಭಾಗೀರಥಿ ಅವರು ಮನೆಯ ತಾರಸಿಯ ಮೇಲೆ ಬದಿಯಲ್ಲಿ ಮಳೆನೀರು ತುಂಬಿಕೊಂಡಿತ್ತು. ಭಾಗೀರಥಿ ಅವರು ತಾರಸಿಗೆ ಹೋಗಿ ಸ್ವಚ್ಛ ಮಾಡುತ್ತಿದ್ದ ವೇಳೆ ಮನೆಯ ಬದಿಯಲ್ಲಿ ಹಾದು ಹೋಗಿದ್ದ ಕೊಳವೆಬಾವಿ ಸಂಪರ್ಕದ ವಿದ್ಯುತ್‌ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ ಪರಿಣಾಮ ಸಾವನ್ನಪ್ಪಿದ್ದಾರೆ.

ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts