ವಿಟ್ಲ: ಪುತ್ತೂರಿನಿಂದ ಉಪ್ಪಳ ಕಡೆಗೆ ಸಾಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ಅತಿಯಾದ ವೇಗದ ಚಾಲನೆಯಿಂದಾಗಿ ಬೈರಿಕಟ್ಟೆಯ ಕೆಳಗಿನ ತಿರುವಿನಲ್ಲಿ ಮಾರ್ಗ ಬಿಟ್ಟು ಹೊಂಡಕ್ಕೆ ವಾಲಿನಿಂತಿದೆ. ಅದೃಷ್ಟವಶಾತ್ ಬಸ್ ಪಲ್ಟಿಯಾಗಿಲ್ಲ.
ಬಸ್ಸಿನಲ್ಲಿ ಮುಗುಳಿ ಬಾಯಾರು, ಉಪ್ಪಳಕ್ಕೆ ಹೋಗುವ ಪ್ರಯಾಣಿಕರಿದ್ದರು. ಜನಪ್ರತಿನಿಧಿಗಳು, ಅಧಿಕಾರಿಗಳು ಈ ರೀತಿ ನಿರ್ಲಕ್ಷ್ಯ ತೋರುವ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.