ಬೆಳ್ತಂಗಡಿ; ಬದ್ಯಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಮಗುಚಿ ಬಿದ್ದು ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.
ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ. ಮಾಳವ (33) ಎಂಬವರಾಗಿದ್ದಾರೆ.
ಗುರುವಾಯನಕೆರೆಯಿಂದ ಅಳದಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋ ರಿಕ್ಷಾ ಅಪಘಾತ ಸಂಭವಿಸಿದೆ. ಕೂಡಲೇ ಗಂಭೀರವಾಗಿ ಗಾಯಗೊಂಡ ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತ ಪಟ್ಟಿದ್ದಾರೆ ಎನ್ನಲಾಗಿದೆ.
ಆಟೋದಲ್ಲಿದ್ದ ಇನ್ನೊಬ್ಬರು ಗಾಯಗೊಂಡಿದ್ದು ಆವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.