ಅಪಘಾತ

ಬಸ್ ಡಿಕ್ಕಿ; ಮಹಿಳೆ ಮೃತ್ಯು!!

GL
ಢಿಕ್ಕಿ ಹೊಡೆದ ಪರಿಣಾಮ ನಡೆದು ಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ವೇಗದೂತ ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದು ಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ   ಮಣಿಪಾಲದ ಈಶ್ವರ ನಗರ ಎಂಬಲ್ಲಿ ನಡೆದಿದೆ.ಮೃತರನ್ನು ನಿವೃತ್ತ ನರ್ಸ್ ವಿನೋದ(70) ಎಂದು ಗುರುತಿಸಲಾಗಿದೆ.

chennai-shopping
maithri

ಅವರು ತನ್ನ ಪುತ್ರಿಯ ಮಕ್ಕಳನ್ನು ಶಾಲೆಯ ಬಸ್ಸಿನಿಂದ ಇಳಿಸಿ ಮನೆಗೆ ಬಿಟ್ಟು ಬಂದಿದ್ದು, ಬಳಿಕ ಉಳ್ಳೂರಿಗೆ ಹೋಗಲು ರಸ್ತೆ ಬದಿ ನಿಂತಿದ್ದಾಗ ಮಣಿಪಾಲ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ವೇಗದೂತ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಮಹಿಳೆ ಬಸ್ಸಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದು ಬಂದಿದೆ.ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts