tamanvi
ಅಪಘಾತ

ವಿಟ್ಲದಲ್ಲಿ ಟಿಪ್ಪರ್-ಕಾರು ಡಿಕ್ಕಿ: ಚಾಲಕ ಅನೀಶ್ ಅನಂತಾಡಿ ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪ‌ರ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಅನಂತಾಡಿ (34) ಮೃತಪಟ್ಟಿದ್ದು, ಅವರ ಸಹೋದರಿ ಮಹಿಳೆ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

maithri

ಕಲ್ಲಡ್ಕದಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ, ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ಮಿನಿ ಟಿಪ್ಪರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನೊಳಗಿನವರು ತೀವ್ರ ಗಾಯಗೊಂಡು ಸ್ಥಳೀಯರಿಂದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗಂಭೀರ ಗಾಯಗೊಂಡ ಅನೀಶ್ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಮೃತಪಟ್ಟಿದ್ದಾರೆ.

ಅನೀಶ್ ಅವರು ಅನಂತಾಡಿ ಆಶ್ವತ್ತಡಿ ಮೂಲದವರು ಹಾಗೂ ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು. ಕುಟುಂಬದ ಸದಸ್ಯರನ್ನು ವಿಟ್ಲಕ್ಕೆ ಬಿಟ್ಟುಕೊಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…