ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.
ದಬ್ಬಡ್ಕ ಕೊಪ್ಪದ ಶಿವಪ್ಪ ( 72) ಮೃತ ದುರ್ದೈವಿ. ಅವರು ಆ.06 ರಂದು ರಾತ್ರಿ 10.30 ರ ಸಮಯಕ್ಕೆ ಮನೆಯ ಹತ್ತಿರ ನಾಯಿ ಬೊಗಳುತ್ತಿದೆ ಎಂದು ತೋಟದ ಕಡೆ ಹೋದಾಗ ಆನೆ ತುಳಿದಿದೆ. ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಮೃತ ಪಟ್ಟಿದ್ದಾರೆನ್ನಲಾಗಿದೆ. ಇದೀಗ ಮೃತದೇಹವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
























