ಅಪಘಾತ

ಪುತ್ತೂರು: ಭೀಕರ  ಸಿಡಿಲಿಗೆ ಎರಡು ಮನೆಗಳು ಛಿದ್ರ : ಮಗು ಸಹಿತ ನಾಲ್ವರು ಅಸ್ವಸ್ಥ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರಸಭೆ ವ್ಯಾಪ್ತಿಯ ಬೆದ್ರಾಳ ಸಮೀಪದvನೆಲ್ಲಿಗೇರಿಯಲ್ಲಿ ಮತ್ತು ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿಯಲ್ಲಿ ಅ.19ರ ಸಂಜೆ ಸಿಡಿಲು ಬಡಿದ ಪರಿಣಾಮ ದಯಾನಂದ ಕುಲಾಲ್ ಮತ್ತು ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿಯ ಅನಂತರಾಮ ಶೆಟ್ಟಿ ಅವರ ಹಂಚಿನ ಮನೆ ಸಂಪೂರ್ಣ ಹಾನಿಗೊಂಡಿದ್ದು, ಹಂಚು ಛಿದ್ರಗೊಂಡಿದೆ. ಬೆದ್ರಾಳದಲ್ಲಿ ಒಂದು ವರ್ಷದ ಮಗು ಸಹಿತ ನಾಲ್ವರು ಅಸ್ವಸ್ಥಗೊಂಡ ಘಟನೆ ನಡೆದಿದೆ.

maithri

ಸಿಡಿಲಿನ ರಭಸಕ್ಕೆ ಮನೆಯ ಗೋಡೆಯಲ್ಲಿ ಬಿರುಕುಗಳು ಉಂಟಾಗಿ ಕಲ್ಲುಗಳು ಜಾರಿದ್ದು, ಹಂಚುಗಳು ಮತ್ತು ಶೀಟ್‌ಗಳು ತುಂಡಾಗಿವೆ. ಮನೆಯಲ್ಲಿದ್ದ ನೀರಿನ ಬ್ಯಾರೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆ ಸಮಯದಲ್ಲಿ ಮನೆಯಲ್ಲಿದ್ದ ದಯಾನಂದ ಅವರ ಒಂದು ವರ್ಷದ ಮಗು, ತಾಯಿ ಲಕ್ಷ್ಮೀ, ಪತ್ನಿ ರಕ್ಷಿತಾ ಹಾಗೂ ದಯಾನಂದ ಸ್ವತಃ ಅಸ್ವಸ್ಥಗೊಂಡಿದ್ದಾರೆ. ಎಲ್ಲರನ್ನೂ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷ ಬಾಲಚಂದ್ರ ಕೆ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಮತ್ತು ಪೌರಾಯುಕ್ತ ವಿದ್ಯಾ ಎಮ್ ಕಾಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಅಸ್ವಸ್ಥರ ಆರೋಗ್ಯದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…