ಅಪಘಾತ

ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು:  ನವಮಂಗಳೂರು ಬಂದರ್‌ನಿಂದ ನಿಂದ 100 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಶನಿವಾರ ಅಪಾಯಕಾರಿ ಸ್ಥಿತಿಯಲ್ಲಿದ್ದ ಬೋಟ್ ವೊಂದನ್ನು ಪತ್ತೆ ಹಚ್ಚಿದ ಇಂಡಿಯನ್ ಕೋಸ್ಟ್ ಗಾರ್ಡ್ 31 ಮೀನುಗಾರರನ್ನು ರಕ್ಷಿಸಿದೆ.

maithri

ಅ.24ರಂದು ಗೋವಾ ತೀರದಲ್ಲಿ ಕಾಣಿಸಿಕೊಂಡಿದ್ದ ಈ ಬೋಟ್ ಬಳಿಕ ಕಾಣೆಯಾಗಿತ್ತು. ಮಾಹಿತಿ ಪಡೆದ ಕೋಸ್ಟಾರ್ಡ್ ಅಧಿಕಾರಿಗಳು ಸಿಬ್ಬಂದಿ ಮೂಲಕ ಹುಡುಕಾಟ ಆರಂಭಿಸಿದರೂ ಪ್ರಯೋಜನವಾಗಲಿಲ್ಲ. ಕೆಲವು ದಿನದಿಂದ ಸುರಿಯುವ ಭಾರೀ ಮಳೆ, ಗಾಳಿಗೆ ಸಮುದ್ರ ಪ್ರಕ್ಷುಬ್ಧಗೊಂಡಿತ್ತು. ಈ ವೇಳೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಾಪತ್ತೆಯಾಗಿತ್ತು. ಬೋಟ್ ಪತ್ತೆ ಪ್ರಯತ್ನಿಸಿದರೂ ಫಲಿಸಿರಲಿಲ್ಲ. ಅಂತಿಮವಾಗಿ ಕೊಚ್ಚಿಯಿಂದ ಏರ್ ಕ್ರಾಫ್ಟ್ ತರಿಸಿ ಹುಡುಕಾಟ ಮುಂದುವರಿಸಲಾಯಿತು. ಶನಿವಾರ ಅಪಾಯಕ್ಕೆ ಸಿಲುಕಿದ್ದ ಬೋಟ್ ಅನ್ನು ಪತ್ತೆ ಹಚ್ಚಲಾಗಿದ್ದು, ಅದರಲ್ಲಿದ್ದ 31 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಕೋಸ್ಟ್ ಗಾರ್ಡ್ ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…