tamanvi
ಅಪಘಾತ

ಕಾರು ಬೆಂಕಿಗಾಹುತಿ: ಚಾಲಕ ಅಪಾಯದಿಂದ ಪಾರು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗಾಹುತಿಯಾದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

maithri

ಬಸ್ ನಿಲ್ದಾಣದ ಮುಖ್ಯ ಪ್ರವೇಶದ್ವಾರ ಎದುರಿನಿಂದ ಕಾರು ಚಲಿಸುತ್ತಿದ್ದ ವೇಳೆ ಎಂಜಿನ್ ಭಾಗದಿಂದ ಹೊಗೆ ಹೊರಬರುತ್ತಿರುವುದನ್ನು ಗಮನಿಸಿದ ಚಾಲಕ ತಕ್ಷಣ ಜಾಗರೂಕತೆ ತೋರಿಸಿ ವಾಹನವನ್ನು ನಿಲ್ಲಿಸಿ ಹೊರಗೆ ಹಾರಿದರು. ಕೆಲವೇ ಕ್ಷಣಗಳಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಯಿತು. ದಟ್ಟ ಹೊಗೆ ಮತ್ತು ಅಗ್ನಿಜ್ವಾಲೆಗಳು  ಬಸ್ ನಿಲ್ದಾಣದಲ್ಲಿದ್ದ ನೂರಾರು  ಪ್ರಯಾಣಿಕರಲ್ಲಿ ಆತಂಕ ಉಂಟುಮಾಡಿತ್ತು. ಸ್ಥಳೀಯ ಅಂಗಡಿ ಮಾಲೀಕರು ಮತ್ತು ಆಟೋ ಚಾಲಕರು  ಸ್ಥಳಕ್ಕೆ ಧಾವಿಸಿದರೂ, ಬೆಂಕಿ ವೇಗವಾಗಿ ತೀವ್ರಗೊಂಡಿತು.

ಮಾಹಿತಿ ಪಡೆದ ತಕ್ಷಣ ಕದ್ರಿ ಅಗ್ನಿಶಾಮಕ ಕೇಂದ್ರದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದರು. ವಾಹನಕ್ಕೆ ಹೆಚ್ಚಿನ ಹಾನಿಯಾಗಿದ್ದರೂ, ಯಾವುದೇ ಸಾವು ಅಥವಾ ಗಾಯಗಳ ವರದಿ ಇಲ್ಲ.

ಘಟನೆಯನ್ನು ನೋಡಲು ಜನರು ಸೇರಿದ್ದರಿಂದ ಬಿಜೈ ರಸ್ತೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ದಟ್ಟಣೆ ತೆರವುಗೊಳಿಸಿ ಬಸ್‌ಗಳ ಸಂಚಾರ ಸುಗಮಗೊಳಿಸಿದರು.

ಎಂಜಿನ್‌ನ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…