ಅಪಘಾತ

ಪುತ್ತೂರು: ಬಸ್ಸಿಂದ ರಸ್ತೆಗೆಸೆಯಲ್ಪಟ್ಟ ಪ್ರಯಾಣಿಕ – ಮಾನವೀಯತೆ ಮೆರೆದ ಚಾಲಕ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋರ್ವರು ಅಸ್ವಸ್ಥಗೊಂಡು ರಸ್ತೆಗೆಸೆಯಲ್ಪಟ್ಟ ಘಟನೆ ಮಂಗಳವಾರ ಪುತ್ತೂರು ವಿಟ್ಲ ಮಾರ್ಗ ಮಧ್ಯೆ ನಡೆದಿದೆ.

ರಸ್ತೆಗೆಸೆಯಲ್ಪಟ್ಟ ವ್ಯಕ್ತಿಯನ್ನು ಬಸ ಚಾಲಕ ಅದೇ ಬಸ್ ನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಮಾನವೀಯತೆ ಮೆರೆದಿದ್ದಾರೆ.

ಪುತ್ತೂರು ವಿಟ್ಲ ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್ ನಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡು ರಸ್ತೆಗೆ ಎಸೆಯಲ್ಪಟ್ಟಿದ್ದರು. ಪರಿಣಾಮ ಅವರಿಗೆ ಗಾಯಗಳಾಗಿದ್ದು ಕೂಡಲೇ ಬಸ್ ಚಾಲಕ ಅದೇ ಬಸ್ ನಲ್ಲಿ ಗಾಯಾಳು ಪ್ರಯಾಣಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts