ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರಿನಲ್ಲಿ ನಿಂತಿದ್ದ ವಾಹನಗಳಿಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.
ಕೇರಳ ಮೂಲದ ಕಾರು ಇದೆಂದು ಹೇಳಲಾಗಿದೆ. ಘಟನೆಯಲ್ಲಿ ಓರ್ವ ಬೈಕ್ ಸವಾರನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ನಿಲ್ಲಿಸಿದ ಬೈಕ್ ಹಾಗೂ ಇತರೆ ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಥಳೀಯರು ಕಾರನ್ನು ಬೆನ್ನತ್ತಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.





















