tamanvi
ಅಪಘಾತ

ಮಂಗಳೂರು: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ.

ಏ. 11ರಂದು ಮಹಾಕಾಳಿಪಡ್ಪಿ ಅಂಡರ್‌ಪಾಸ್ ಬಳಿಯ ಭಜನಾ ಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ.

ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts