tamanvi
ಅಪಘಾತ

ಸ್ಕೂಟಿಗೆ ಹತ್ತಿಕೊಂಡ ಬೆಂಕಿ: ಚಿಕಿತ್ಸೆ ಫಲಿಸದೆ ಬಾಲಕ ದಿಯಾನ್ ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಜೂನ್ 12ರಂದು ನಡು ರಸ್ತೆಯಲ್ಲಿ ಸ್ಕೂಟಿಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ.

maithri

ಮೃತ ಬಾಲಕನನ್ನು ದಿಯಾನ್ (7) ಎಂದು ಗುರುತಿಸಲಾಗಿದೆ. ಆತ ಬೆಳಾಲು ನಿವಾಸಿ, ನಿವೃತ್ತ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರ ಪುತ್ರನಾಗಿದ್ದು, ಉಜಿರೆಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ.

ಜೂನ್ 12ರಂದು ಮೋಹನ್ ಗೌಡ ಅವರು ಪುತ್ರ ದಿಯಾನ್‌ನನ್ನು ಕರೆದುಕೊಂಡು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ವಾಹನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ದಿಯಾನ್‌ಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಅವಘಡದಲ್ಲಿ ಮೋಹನ್ ಗೌಡ ಅವರಿಗೂ ಗಾಯಗಳಾಗಿದ್ದರೂ, ಅವರು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿದ್ದ ದಿಯಾನ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾನೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರಿನಲ್ಲಿ ಸ್ಕೂಟರ್ ಢಿಕ್ಕಿ: ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕೊಯಿಲ ಸೀತಾರಾಮ ಗೌಡ ಮೃತ್ಯು!!

ಜಮ್ಮುವಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನೋರ್ವರು ಬುಧವಾರ ಮಂಗಳೂರಿನ ಕೆಪಿಟಿ ಬಳಿ ಸಂಭವಿಸಿದ…