tamanvi
ನಿಧನ

ಸುಳ್ಯ: ಮಗುವಿನ ಸಾವಿನಿಂದ ಮನನೊಂದು ತಂದೆ ಆತ್ಮಹತ್ಯೆ!

ಸುಳ್ಯ: ಮಗುವಿನ ಸಾವಿನಿಂದ ಮನನೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಬಾಳಿಲದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಮಗುವಿನ ಸಾವಿನಿಂದ ಮನನೊಂದು ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಬಾಳಿಲದಲ್ಲಿ ನಡೆದಿದೆ.

ಬಾಳಿಲ ಬೊಮ್ಮಣ ಮಜಲು ಎಂಬಲ್ಲಿನ ನಿವಾಸಿ ಬಾಲಕೃಷ್ಣ (38) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಅವರ ಆರು ತಿಂಗಳ ಪುತ್ರಿ ಐದು ದಿನಗಳ ಹಿಂದೆ ಅನಾರೋಗ್ಯಕ್ಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿತ್ತು. ಮಗು ನಿಧನವಾದ ಹಿನ್ನೆಲೆ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಮೇ 28 ರಂದು ರಾತ್ರಿ ಮನೆ ಬಳಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರು ದಿನ ಮುಂಜಾನೆ( ಮೇ.29) ಮನೆಯವರ ಗಮನಕ್ಕೆ ಬಂದಿದೆ. ಮೃತರು ತಂದೆ , ತಾಯಿ , ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ .


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…