ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಉದ್ಯೋಗಿ, ನೆಹರುನಗರ ನಿವಾಸಿ, ನೆಹರುನಗರ ನಿವಾಸಿ ಕುಂಞಿಣ್ಣ ಗೌಡ ಅವರು ಹೃದಯಾಘಾತದಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.
ಕೆಲ ವರ್ಷಗಳ ಹಿಂದೆ ವಿವೇಕಾನಂದ ಮಹಾವಿದ್ಯಾಲಯದಿಂದ ನಿವೃತ್ತರಾಗಿದ್ದ ಅವರು, ನಂತರ ನರೇಂದ್ರದಲ್ಲೂ ಕೆಲಸ ನಿರ್ವಹಿಸಿದ್ದರು.
ಕೆಲ ತಿಂಗಳ ಹಿಂದೆ ಅವರ ಪತ್ನಿಯೂ ಮೃತಪಟ್ಟಿದ್ದರು.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.