tamanvi
ನಿಧನ

ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತದಿಂದ ಸಾವು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗದ ಆಯನೂರಿನಲ್ಲಿ ಒಂದೂವರೆ ತಿಂಗಳ ಬಾಣಂತಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಬಾಣಂತನಕ್ಕೆಂದು ಹಾಸನದಿಂದ ಶಿವಮೊಗ್ಗದ ಆಯನೂರಿಗೆ ಹರ್ಷಿತಾ (22) ಎಂಬ ಮಹಿಳೆ ಹೋಗಿದ್ದರು. ಆದರೆ ತವರು ಮನೆಯಲ್ಲೇ ಹರ್ಷಿತಾಗೆ ಹೃದಯಾಘಾತ ಉಂಟಾಗಿದೆ.

maithri

ಹಾಸನದ ಕೊಮ್ಮೆನಹಳ್ಳಿಯ ಹರ್ಷಿತಾ ಶಿವಮೊಗ್ಗದ ಆಯನೂರು ಗ್ರಾಮದಲ್ಲಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಮೊನ್ನೆ ರಾತ್ರಿ ಹರ್ಷಿತಾಗೆ ಎದೆನೋವು ಕಾಣಿಸಿಕೊಂಡಿದ್ದು ಹಾಸನದ ಕೊಮ್ಮೇನಹಳ್ಳಿಯಲ್ಲಿರುವ ತಮ್ಮ ಪತಿಗೆ ಕರೆ ಮಾಡಿ ಬರಲು ಹೇಳಿದ್ದಾರೆ. ಬೆಳಗ್ಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆಂಬುಲೆನ್ಸ್‌ನಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts