tamanvi
ನಿಧನ

ವೀರಕಂಬ ಗ್ರಾಮ ಪಂಚಾಯತ್ ಸದಸ್ಯ ರಘು ಪೂಜಾರಿ ನಿಧನ!

ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳಪದವಿನ ರಘು ಪೂಜಾರಿ ಎಂ. ರವರು ಇಂದು (ಜು. 02) 3.00 ಗಂಟೆಯ ವೇಳೆಗೆ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಇವರು ಪತ್ನಿ, ಇಬ್ಬರು ಪುತ್ರರು,ಒಬ್ಬರು ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರು ಹಲವಾರು ವರ್ಷಗಳ ಕಾಲ ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಒಕ್ಕೆತ್ತೂರು ಶಾಲೆಯ SDMC ಅಧ್ಯಕ್ಷರಾಗಿ, ಸಮಾಜದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.ಮೃತರ ಅಂತ್ಯಕ್ರಿಯೆಯು ಮಧ್ಯಾಹ್ನ ಒಂದು ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…