tamanvi
ನಿಧನ

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ಮಾಣಿ ನಿಧನ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ ನಡೆಸುತ್ತಿದ್ದರು. ಹಾಸ್ಯಪ್ರಜ್ಞೆ ಉಳ್ಳವರಾಗಿದ್ದ ಇವರು ಜಯಂ ಕಲಾನಿಕೇತನ ಮಾಣಿ ನೃತ್ಯತಂಡದಲ್ಲಿ ಕಲಾವಿದರಾಗಿದ್ದ ಇವರು ಕಲಾಮಾತೆ ನಾಗನವಳಚ್ಚಿಲ್ ತಂಡದ ಕಲಾವಿದರಾಗಿದ್ದು, ಶಾಂತರಾಮ್ ಕಲ್ಲಡ್ಕ ನಿರ್ದೇಶನದ ತುಳು ಅಪ್ಪೆಜೋಕ್ಲು ಕಲಾ ಬಳಗದ ನಾಟಕಗಳಲ್ಲಿಯೂ ಅಭಿನಯಿಸಿದ್ದರು.‌

ಪ್ರಸ್ತುತ ನಮ್ಮ‌ ಕಲಾವಿದರು ನೆಲ್ಯಾಡಿ ತುಳುನಾಟಕ ತಂಡದ ಕಲಾವಿದರಾಗಿದ್ದ ಇವರು, ಯುವ ಕಲಾವಿದ ಸಚಿನ್ ಮಾಣಿ ಯವರ ಹಲವು ಹಾಸ್ಯ ವಿಡಿಯೋಗಳಲ್ಲಿ ಅಭಿನಯಿಸಿದ ಇವರು ಸ್ನೇಹಜೀವಿ.

ಮೃತರು ತಾಯಿ, ಸಹೋದರ, ಪತ್ನಿ, ಪುಟ್ಟಮಗಳು ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…