tamanvi
ನಿಧನ

ಉದ್ಯಮಿ ರೋಶನ್ ಬನ್ನೂರು ಅವರಿಗೆ ಪಿತೃವಿಯೋಗ!ಅಪ್ಪಟ ಕನ್ನಡ ಪ್ರೇಮಿ ಸೀತಾರಾಮ ಶೆಟ್ಟಿ ಬನ್ನೂರು ವಿಧಿವಶ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉದ್ಯಮಿ ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65 ವ.) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು. ಕನ್ನಡದ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದ ಇವರು, ಯಕ್ಷಗಾನ ಪ್ರೇಮಿಯೂ ಆಗಿದ್ದರು. ದಿ. ಚಿದಾನಂದ ಕಾಮತ್ ಕಾಸರಗೋಡು ಅವರ ಸಾಂಸ್ಕೃತಿಕ ಕಲಾಕೇಂದ್ರ ಬೊಳುವಾರು ಇದರ ಎಲ್ಲಾ ಕನ್ನಡ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿದ್ದರು.

ಪುತ್ರರಾದ ಉದ್ಯಮಿ ರೋಶನ್ ರೈ, ರೋಹಿತ್, ಪುತ್ರಿ ರೋಜಾ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…