ಪುತ್ತೂರು: ಜೆಸಿಐ ಪುತ್ತೂರು ಇದರ ಪೂರ್ವಾಧ್ಯಕ್ಷ, ಪಡೀಲು ನಿವಾಸಿ ರತ್ನಾಕರ್ ಬಿ.ವಿ. (68) ಶನಿವಾರ ರಾತ್ರಿ ಹೃದಯಾಘಾತದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಸಾಮಾಜಿಕ ಜೀವನದಲ್ಲಿ ಸಕ್ರೀಯರಾಗಿದ್ದ ಅವರು, ಪುತ್ತೂರು ಜೆಸಿಐನಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದರು. 1996ರಲ್ಲಿ ಪುತ್ತೂರು ಜೆಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ ಕೊಂಬೆಟ್ಟು ಜೂನಿಯರ್ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲೆ ಜಯಶ್ರೀ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.