ಬೆಂಗಳೂರು: ಕಳೆದ ಕೆಲ ಸಮಯದಿಂದ ಅನಾರೋಗ್ಯಪೀಡಿತರಾದ್ದ ಸ್ಯಾಂಡಲ್ವುಡ್ ನಟ ಸಂತೋಷ್ ಬಾಲರಾಜ್ (34) ಮಂಗಳವಾರ ನಿಧನರಾದರು.
ನಟ ಸಂತೋಷ್ ಬಾಲರಾಜ್ ಜಾಂಡೀಸ್ನಿಂದ ಬಳಲುತ್ತಿದ್ದರು. ಇತ್ತೀಚೆಗೆ ಚಿಕಿತ್ಸೆಗಾಗಿ ಬೆಂಗಳೂರಿನ ನಟ ಸಂತೋಷ್ ಬಾಲರಾಜ್ ಅವರನ್ನು ಕುಮಾರಸ್ವಾಮಿ ಲೇಔಟ್ನ ಸಾಗರ್ ಅಫೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೋಮಾಗೆ ಜಾರಿದ್ದರು.
ಕರಿಯ-2, ಕೆಂಪ, ಗಣಪ, ಬರ್ಕ್ಲಿ, ಸತ್ಯ ಸಿನಿಮಾಗಳಲ್ಲಿ ಸಂತೋಷ್ ನಾಯಕ ನಟನಾಗಿ ಅಭಿನಯಿಸಿದ್ದರು.























