tamanvi
ನಿಧನ

ಇಲಿ ಪಾಷಾಣ ಸೇವಿಸಿ ಮೇಘರಾಜ್ ಮೃತ್ಯು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸವಣೂರು: ಸವಣೂರು ಗ್ರಾಮದಲ್ಲಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸವಣೂರು ಗ್ರಾಮದ ಅಗರಿ ನಿವಾಸಿ ರಾಮಚಂದ್ರ ಅವರ ಪುತ್ರ ಮೇಘರಾಜ್ ಮೃತ ಯುವಕ.

ಡಿಸೆಂಬರ್ 25ರಂದು ಮನೆಯಲ್ಲಿ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದರು. ಅವರನ್ನು ಚಿಕಿತ್ಸೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗೆ ಮೇಲ್ದರ್ಜೆಯ ಆಸ್ಪತ್ರೆಗೆ ಸೇರಿಸುವಂತೆ ಸೂಚಿಸಿದ್ದರು. ಆದರೆ ಮೇಘರಾಜರವರು ಆಸ್ಪತ್ರೆಗೆ ಹೋಗದೇ ವಾಪಾಸ್‌ ಮನೆಗೆ ಬಂದಿದ್ದು,ಡಿ.28ರಂದು ಮನೆಯಲ್ಲಿ ವಿಪರೀತ ವಾಂತಿ ಮಾಡಿ ಅಸ್ವಸ್ಥಗೊಂಡಾಗ ಪುತ್ತೂರಿನ ಆದರ್ಶ ಆಸ್ಪತ್ರೆಗೆ ಕರೆತರಲಾಗಿತ್ತು.

ಅಲ್ಲಿನ ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು ಮೇಲ್ದರ್ಜೆಯ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದು, ಬಳಿಕ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಮೃತರ ತಂದೆ ರಾಮಚಂದ್ರ ಅವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ…