ಪುತ್ತೂರು: ಶಾಂತಿಗೋಡು ನಿವಾಸಿ, ಕೃಷಿಕ ರವೀಂದ್ರ ಕೆ. (48 ವ.) ಹೃದಯಾಘಾತದಿಂದ ರವಿವಾರ ಬೆಳಿಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ರೋಟರಿ ಕ್ಲಬ್ ಪುತ್ತೂರು ಸಿಟಿ ಇದರ ಸಕ್ರೀಯ ಸದಸ್ಯರಾಗಿದ್ದ ಇವರು, ವಿದೇಶದಲ್ಲಿ ಉದ್ಯೋಗದಲ್ಲಿದ್ದರು. ಕೆಲ ವರ್ಷಗಳ ಹಿಂದೆ ಊರಿಗೆ ಹಿಂದಿರುಗಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಮೆಸ್ಕಾಂ ಇಂಜೀನಿಯರ್ ಪವಿತ್ರಾ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
























