ಪುತ್ತೂರು: ಔಷಧಿ ಕುಡಿದು ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರಿನ ಆಸ್ಪತ್ರೆಯಿಂದ ವರದಿಯಾಗಿದೆ.
ರಾಮಕುಂಜ ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ 4ನೇ ತರಗತಿಯ ಚಿರಾಗ್ (10 ವ.) ಮೃತಪಟ್ಟ ಬಾಲಕ.
ಅಸೌಖ್ಯದ ಹಿನ್ನಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಔಷಧಿ ಕುಡಿದು ಅಸ್ವಸ್ಥಗೊಂಡ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ತರಲಾಯಿತು. ಅಷ್ಟರಲ್ಲೇ ಬಾಲಕ ಕೊನೆಯುಸಿರೆಳೆದಿದ್ದ ಎಂದು ಹೇಳಲಾಗಿದೆ.
























