tamanvi
ನಿಧನ

ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಸಾವು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಅಡ್ಯನಡ್ಕ ಸಮೀಪದ ಮನಿಮುಂಡದಲ್ಲಿ ನಡೆದಿದೆ.

maithri

ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿದ್ದರು.

ಘಟನೆಯಿಂದ ದಿನೇಶ್ ಅವರು ಪತ್ನಿ ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts