ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಅಡ್ಯನಡ್ಕ ಸಮೀಪದ ಮನಿಮುಂಡದಲ್ಲಿ ನಡೆದಿದೆ.
ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿದ್ದರು.
ಘಟನೆಯಿಂದ ದಿನೇಶ್ ಅವರು ಪತ್ನಿ ಹಾಗೂ ತಂದೆ-ತಾಯಿಯನ್ನು ಅಗಲಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
























