ಕೊಂಬಾರು: ಮಣಿಭಾಂಡದಲ್ಲಿ ನೆಲೆಸಿದ್ದ ಸಾಮಾಜಿಕ ಧುರೀಣ ಹಾಗೂ ಲೋಕೋಪಯೋಗಿ ಇಲಾಖೆಯ ಪ್ರಮೋದ್ ಕುಮಾರ್ ಅವರ ತಂದೆ ಕುಂಞಣ್ಣ ಗೌಡ ಅವರು ನಿಧನರಾಗಿದ್ದಾರೆ.
ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಕುಂಞಣ್ಣ ಗೌಡ ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರಿನ ಮನೆಯಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು. ಬಳಿಕ ಮಣಿಭಾಂಡದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಬಂಧು-ಮಿತ್ರರು ಹಾಗೂ ಹಿತೈಷಿಗಳು ಪ್ರಾರ್ಥಿಸಿದ್ದಾರೆ.

























