tamanvi
ಕರಾವಳಿ

ಮಂಗಳೂರು: ಮರದ ಕೊಂಬೆ ಬಿದ್ದು  ಮೂವರು ವಿದ್ಯಾರ್ಥಿನಿಯರಿಗೆ  ಗಂಭೀರ ಗಾಯ!

ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ.

ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ನಿವಾಸಿ ಅಪ್ರತ್ (18) ಗಾಯಗೊಂಡವರು ಎಂದು ತಿಳಿದು ಬಂದಿದೆ.

ನಗರದ ಬಲ್ಮಠದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರಾಗಿರುವ ಇವರು ಸೋಮವಾರ ಸಂಜೆ ಹಂಪನಕಟ್ಟೆಯ ಬಳಿ ಮನೆಗೆ ತೆರಳಲು ಸಂಜೆ 4:30ಕ್ಕೆ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿತ್ತು ಎನ್ನಲಾಗಿದೆ. ಹಲವು ಮಂದಿ ಇಲ್ಲಿಯೇ ಬಸ್‌ಗೆ ಕಾಯುತ್ತಿದ್ದರು ಎನ್ನಲಾಗಿದ್ದು, ಬಹುತೇಕ ಮಂದಿ ಅಪಾಯದಿಂದ ಪಾರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…