Gl harusha
ಕರಾವಳಿ

ಉಡುಪಿ: ಮೀನು ಕಳ್ಳತನ ಆರೋಪ; ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ.!!

ಮೀನುಗಾರಿಕಾ ಬೋಟ್‌ನಿಂದ ದುಬಾರಿ ಬೆಲೆಯ ಸಿಗಡಿ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಮೀನುಗಾರಿಕಾ ಬೋಟ್‌ನಿಂದ ದುಬಾರಿ ಬೆಲೆಯ ಸಿಗಡಿ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.

Pashupathi

ಸಿಗಡಿ ಮೀನುಗಳನ್ನು ಕದ್ದಿರುವ ಮಹಿಳೆಯನ್ನು ಮೊದಲಿಗೆ ಮೀನುಗಾರ ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಮಹಿಳೆಗೆ ಕಪಾಳಮೋಕ್ಷ ಮಾಡಿ ಕದ್ದ ಮೀನು ತೋರಿಸುವಂತೆ ಒತ್ತಾಯಿಸಿದ್ದಾರೆ. ಆದರೆ ತಾನು ಮೀನು ಕದ್ದಿಲ್ಲ ಅಂತ ವಾದ ಮಾಡಿದ ಆಕೆಯನ್ನು ಮರಕ್ಕೆ ಕಟ್ಟಿಹಾಕಿದ ಜನರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

akshaya college

ಈ ವೇಳೆ ಸಾರ್ವಜನಿಕರೂ ಕೂಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಇದಾದ ಬಳಿಕ ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿ ಮಹಿಳೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್‌ ಠಾಣೆಯಲ್ಲಿ ತಾನು ಕದ್ದಿರುವುದಾಗಿ ಒಪ್ಪಿಕೊಂಡ ಮಹಿಳೆ ಕದ್ದಿರುವ ಮೀನಿನ ಹಣ ನೀಡಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಬಂದ್ ಮಾಡದ ಅಂಗಡಿಗಳು: ಪುತ್ತೂರಿನಲ್ಲಿ ಜಮಾಯಿಸಿದ ಹಿಂದೂ ಕಾರ್ಯಕರ್ತರು! ಸವಾಲು ಎದುರಿಸಲು ಸಿದ್ಧ ಎಂದ ಪುತ್ತಿಲ

ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು,…